Current Date 28 Jul, 2026

"ಹಾಯ್ ಬಾಸ್ ಅಂದ, ಹಾಗೇ ಒಂದು ಕಪಾಳಕ್ಕೆ ಹೊಡೆದೆ"; ಒಳ್ಳೆಯ ಹುಡುಗ ಪ್ರಥಮ್

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗುತ್ತಿದ್ದಂತೆ ಅವರ ಅಭಿಮಾನಿಗಳಿಗೆ ಪ್ರಥಮ್ ಸಲಹೆ ನೀಡಿದ್ದರು. ಈ ಬೆನ್ನಲ್ಲೇ ವಿಡಿಯೋ ವೈರಲ್ ಆಗುತ್ತಿದ್ದಂತೆ ದರ್ಶನ್ ಫ್ಯಾನ್ಸ್ ಪ್ರಥಮ್‌ಗೆ ಜೀವ ಬೆದರಿಕೆ ಹಾಕಿದ್ದಾರೆಂದು ಪೊಲೀಸ್ ಠಾಣೆಗೆ ದೂರನ್ನು ದಾಖಲಿಸಿದ್ದಾರೆ.

ಇದೂವರೆಗೂ ದರ್ಶನ್ ಅಭಿಮಾನಿಗಳಿಂದ ಸುಮಾರು 500ಕ್ಕೂ ಅಧಿಕ ಫೋನ್ ಕರೆಗಳು ಬಂದಿವೆ ಎಂದು ಪ್ರಥಮ್ ಹೇಳಿಕೊಂಡಿದ್ದಾರೆ. ಜೀವ ಬೆದರಿಕೆ ಕರೆಗಳನ್ನು ಸ್ವೀಕರಿಸಿದ ಬಳಿಕ ಎಚ್ಚರಿಕೆ ಕ್ರಮವಾಗಿ ರಕ್ಷಣೆ ನೀಡುವಂತೆ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ದರ್ಶನ್ ಅಭಿಮಾನಿಗಳಿಂದ ಬಂದಿದ್ದ ಕರೆಗಳ ಬಗ್ಗೆ ಪ್ರಥಮ್ ಮಾಧ್ಯಮಗಳ ಬಗ್ಗೆ ಮಾತಾಡಿದ್ದಾರೆ.