Current Date 31 Jul, 2026

''ದರ್ಶನ್‌ಗೆ ತೊಂದರೆಯಾಗ್ತಿದೆ ಅಂದಾಗ ಖುಷಿ ಪಡುವ ವ್ಯಕ್ತಿ ನಾನಲ್ಲ'' - ಸುದೀಪ್..

ಕನ್ನಡ ಚಿತ್ರರಂಗದಲ್ಲಿ ಈ ತಲೆಮಾರಿನ ಹೀರೋಗಳ ನಡುವೆ ಕುಚಿಕ್ಕು ಗೆಳೆಯರೆಂದೇ ಪ್ರಸಿದ್ಧರಾಗಿದ್ದವರು ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್. ಆದರೆ ಈ ಸ್ನೇಹ ಕಳೆದ ಏಳೂವರೆ ವರ್ಷಗಳಿಂದ ಗ್ರಹಣ ಕವುಚಿಕೊಂಡಂತೆ ಮಂಕಾಗಿದೆ.
ಒಂದು ವೇಳೆ ರೆಬೆಲ್ ಸ್ಟಾರ್ ಅಂಬರೀಶ್ ಇಂದು ಜೀವಂತವಾಗಿದ್ದಿದ್ದರೆ ಪರಸ್ಪರ ವಿರುದ್ಧ ದಿಕ್ಕುಗಳಂತಾಗಿದ್ದ ಸುದೀಪ್ ಮತ್ತು ದರ್ಶನ್ ಮತ್ತೆ ಒಂದೇ ಬಿಂದುವಿನಲ್ಲಿ ಸಂಧಿಸೋ ಕಾಲ ಕೂಡಿರುತ್ತಿತ್ತು. ಆದರೆ ದುರಾದೃಷ್ಟವಶಾತ್ ಇಂದು ರೆಬೆಲ್ ಸ್ಟಾರ್ ಅಂಬರೀಶ್ ನಮ್ಮ ನಡುವೆ ಇಲ್ಲ. ಕಾಲಾಂತರಗಳ ಈ ಮುನಿಸು ಮುಗಿಯಲಿಲ್ಲ. ಅಂಬರೀಶ್ ಅವರ ಕನಸು ನನಸಾಗಲಿಲ್ಲ.