Current Date 30 Jul, 2026

ಹಿರಿಯ ನಟ-ಮಾಜಿ ಸಚಿವ ಬಿ. ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು

ಹಿರಿಯ ನಟ-ಮಾಜಿ ಸಚಿವ ಬಿ. ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು


ದಾವಣಗೆರೆ: ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ಮಾಜಿ ಶಾಸಕ ಬಿ. ಸಿ. ಪಾಟೀಲ್ ಅವರ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲ ಪುತ್ರಿ ಸೌಮ್ಯಾ ಅವರ ಪತಿ ಕೆಜಿ ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 41 ವರ್ಷ ವಯಸ್ಸಾಗಿತ್ತು

ಬಿ.ಸಿ.ಪಾಟೀಲ್ ಅಳಿಯ ಕೆ.ಜಿ.ಪ್ರತಾಪ್ ಕುಮಾರ್ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರಾ ಬಳಿಯ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿ ವಿಷ ಸೇವಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾದರೂ, ಚಿಕಿತ್ಸೆ ಫಲಿಸಿದೆ ಕೊನೆಯುಸಿರೆಳೆದಿದ್ದಾರೆ.