Current Date 31 Jul, 2026

"ಕಾಂತಾರದ ಅಪ್ಪನಂತಹ ಸಿನಿಮಾ ಮಾಡಿದರೂ ನಾನು ಕಿಚ್ಚ ಸುದೀಪ್ ಅಭಿಮಾನಿ"; ರಿಷಬ್ ಶೆಟ್ಟಿ

ಕನ್ನಡ ಚಿತ್ರರಂಗದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ. ಚಿತ್ರರಂಗದಲ್ಲಿ ಒಗ್ಗಟ್ಟಿಲ್ಲ ಅನ್ನೋ ಆರೋಪ ಆಗಾಗ ಕೇಳಿ ಬರುತ್ತಲೇ ಇದೆ. ಇದನ್ನು ಇತ್ತೀಚೆಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಕೂಡ ಒಪ್ಪಿಕೊಂಡಿದ್ದಾರೆ. ಆದರೆ, ರಿಷಬ್ ಶೆಟ್ಟಿ ಯೂಟ್ಯೂಬ್ ಸಂದರ್ಶನದಲ್ಲಿ ಹೇಳಿದ ಮಾತು ಸಿಕ್ಕಾಪಟ್ಟೆ ಟ್ರೆಂಡಿಂಗ್‌ನಲ್ಲಿದೆ.

ಯಾರಿಗಾದರೂ ಸ್ಟಾರ್ ಪಟ್ಟ ಬಂದು ಬಿಟ್ಟಿರೆ ಅವರು ಬೇರೆ ನಟರೊಂದಿಗೆ ಅಂತರವನ್ನು ಕಾಯ್ಡುಕೊಳ್ಳುತ್ತಾರೆ. ಇದು ಸಹಜವಾಗಿ ಎಲ್ಲಾ ಚಿತ್ರರಂಗದಲ್ಲಿ ಕೇಳಿ ಬರುವ ಮಾತು. ಹಾಗೇ ಕನ್ನಡ ಚಿತ್ರರಂಗದಲ್ಲೂ ಸ್ಟಾರ್ ನಟರು ಅವರವರ ಕೆಲಸವನ್ನು ಅವರು ಮಾಡಿಕೊಂಡಿದ್ದಾರೆ. ಬೇರೆಯವರ ಬಗ್ಗೆ ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ ಎಂಬುದು ಹಲವರ ಆರೋಪ. ಅದರಂತೆಯೇ ಕೆಲ ನಟರು ನಡೆದುಕೊಳ್ಳುತ್ತಿದ್ದಾರೆ. ಆದರೆ, ರಿಷಬ್ ಶೆಟ್ಟಿ ವಿಚಾರನೇ ಬೇರೆ.