Current Date 28 Apr, 2025

"ದೇಶವನ್ನು ಕೆಟ್ಟದಾಗಿ ತೋರಿಸಿ ಪ್ರಶಸ್ತಿ ಪಡೀತಾರೆ" ರಿಷಬ್ ಹೇಳಿಕೆ; ಅವತ್ತೇ ಅಣ್ಣಾವ್ರು ಈ ಮಾತು ಹೇಳಿದ್ರು!

ಬಾಲಿವುಡ್ ಸಿನಿಮಾಗಳ ಬಗ್ಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿಕೆ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಚರ್ಚೆ ಹುಟ್ಟಾಕ್ಕಿದೆ. 'ಕಾಂತಾರ' ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಬೆನ್ನಲ್ಲೇ ರಿಷಬ್ ಮಾತುಗಳು ವೈರಲ್ ಆಗುತ್ತಿದೆ. ಕೆಲವರು ಈ ಹೇಳಿಕೆ ಬಗ್ಗೆ ಚಕಾರ ಎತ್ತಿದ್ದಾರೆ.

ಯಶಸ್ಸು ಸಿಗುತ್ತಿದ್ದಂತೆ ರಿಷಬ್ ಶೆಟ್ಟಿ ಏನೇನೋ ಮಾತನಾಡುತ್ತಿದ್ದಾರೆ. ಹಿಂಗೆಲ್ಲಾ ಮಾತನಾಡಿದ ಮೇಲೆ ಹಿಂದಿ ಬೆಲ್ಟ್‌ನಲ್ಲಿ ಅವರ ಸಿನಿಮಾಗಳು ಓಡಲ್ಲ. ಪ್ಯಾನ್ ಇಂಡಿಯಾ ಹೀರೊ ಅನ್ನುವುದನ್ನು ಅವರು ಮರೆತುಬಿಟ್ಟಿದ್ದಾರೆ, ಮುಂದೆ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ. ಆದರೆ ರಿಷಬ್ ಶೆಟ್ಟಿ ಹೇಳಿದ ಮಾತುಗಳಲ್ಲಿ ಯಾವುದೇ ತಪ್ಪಿಲ್ಲ.