ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ವಿಚಾರಣಾಧೀನ ಕೈದಿಯಾಗಿ ಜೈಲು ಸೇರಿದ್ದಾರೆ. ಈ ಬಗ್ಗೆ ಈಗಾಗಲೇ ಕನ್ನಡ ಚಿತ್ರರಂಗದ ತಾರೆಯರೆಲ್ಲಾ ಒಬ್ಬೊಬ್ಬರಾಗಿ ಮಾತನಾಡುತ್ತಿದ್ದಾರೆ. ಇದೀಗ ನಟ ಶಿವರಾಜ್ಕುಮಾರ್ ಸಹ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನಿರ್ಮಾಪಕರ ಸಂಘದ ಹೊಸ ಕಟ್ಟಡದ ಉದ್ಘಾಟನೆ ಕಾರ್ಯಕ್ರಮಕ್ಕೆ ಶಿವರಾಜ್ಕುಮಾರ್ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುವಾಗ ರೇಣುಕಾಸ್ವಾಮಿ ಪ್ರಕರಣದ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದರು. ಪೊಲೀಸರ ತನಿಖೆ ನಡೆಯುತ್ತಿದೆ. ಏನಾಗುತ್ತದೋ ನೋಡೋಣ ಎಂದಿದ್ದಾರೆ.